Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಆಯೋಜಿಸಿದ ‘ಪೋಕ್ಸೊ’ ಖಾಯಿದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕೋಟ ಪೊಲೀಸ್ ಠಾಣೆಯ ಎ.ಎಸ್.ಐ ಮುಕ್ತಾ ಬಾಯಿ ಹಾಗೂ ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ ವಿವಿಧ ಖಾಯಿದೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಸೌತ್ ರೋಟರಿಯ ಉಪಾಧ್ಯಕ್ಷ ಕೆ.ಪಿ. ಭಟ್, ಯುವ ಪ್ರವರ್ತಕ ನರಸಿಂಹ ಗಾಣಿಗ, ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಅವಿತಾ ಕೊರೆಯಾ, ಡಾ. ದೀಪಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ ಸ್ವಾಗತಿಸಿ, ಶ್ವೇತಾ ವಂದಿಸಿ, ಕಾವ್ಯ ನಿರೂಪಿಸಿದರು.

Exit mobile version