Kundapra.com ಕುಂದಾಪ್ರ ಡಾಟ್ ಕಾಂ

ಮಹಿಳಾ ದಿನಾಚರಣೆಯಂದು ತಾಯಂದಿರಿಗೆ ಪಾದಪೂಜೆ ಮಾಡಿದ ಮಕ್ಕಳು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೇರಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಾಯಂದಿರ ಪಾದ ಪೂಜೆ ನೆರವೇರಿಸುವ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಐತಾಳ್, ಗ್ರಾ.ಪಂ. ಸದಸ್ಯೆ ಜಲಜಾಕ್ಷಿ ಗಾಣಿಗ, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕ ಜಯಾನಂದ ಪಟಗಾರ್, ಶಿಕ್ಷಕಿ ಗೀತಾ, ಗೌರವ ಶಿಕ್ಷಕಿಯರಾದ ಸುಮನಾ, ಚೈತನ್ಯ ಉಪಸ್ಥಿತರಿದ್ದರು.

Exit mobile version