Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಯುವಮೋರ್ಚಾದಿಂದ ಪಂಜಿನ ಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತೀಯ ಜನತಾ ಪಾರ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರ ಯುವಮೋರ್ಚಾ ವತಿಯಿಂದ ಅಪ್ರತಿಮ ದೇಶಭಕ್ತರು, ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ರವರ ಬಲಿದಾನದ ಸ್ಮರಣೆಯಲ್ಲಿ ‘ಶಹಿದ್ ದಿವಸ್’ ಪಂಜಿನ ಮೆರವಣಿಗೆ ಬೈಂದೂರು ಸರ್ಕಲ್ ನಿಂದ ಬಲಿದಾನಗೈದ ದೇಶಭಕ್ತರ ಘೋಷಣೆ ಕೂಗುತ್ತ ಜೈಕಾರ ಹಾಕುತ್ತ ಸಾಗಿ ಸೇನೇಶ್ವರ ದೇವಸ್ಥಾನದಲ್ಲಿ ಮೆರವಣಿಗೆ ಅಂತ್ಯಗೊಳಿಸಲಾಯಿತು

ಪಂಜಿನ ಮೆರವಣಿಗೆಗೆ ಮಂಡಲದ ಅಧ್ಯಕ್ಷರಾದ ದೀಪಕ್ ಶೆಟ್ಟಿ ನೆಲ್ಯಾಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ ಕಾಲ್ತೊಡ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜೇಡ್ಡು,ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಂತೋಷ ಎಮ್, ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಉಪಾಧ್ಯಕ್ಷರಾದ ಲೋಹಿತ್ ಶೆಟ್ಟಿ ಗಂಟಿಹೊಳೆ , ಕಾರ್ಯದರ್ಶಿ ನಿಧಿತ್ ಶೆಟ್ಟಿ ಬೈಂದೂರ್ ಹಾಗೂ ಮಂಡಲದ, ಮಹಾಶಕ್ತಿ ಕೇಂದ್ರದ ಶಕ್ತಿಕೇಂದ್ರದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version