Kundapra.com ಕುಂದಾಪ್ರ ಡಾಟ್ ಕಾಂ

ಮಂಗಳೂರು ವಲಯ ಮಟ್ಟದ ಕ್ರಿಕೆಟ್ ತಂಡಕ್ಕೆ ಸನಿತ್ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮಂಗಳೂರು ವಿಭಾಗ 16 ವರ್ಷ ವಯೋಮಿತಿಯಲ್ಲಿ ಆಯೋಜಿಸಲಾಗಿರುವ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸನಿತ್ ಶೆಟ್ಟಿ ಉತ್ತಮ ಸಾಧನೆ ತೋರುವುದರ ಮೂಲಕ ಉಡುಪಿ ಜಿಲ್ಲೆಯಿಂದ ಮಂಗಳೂರು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

ಸಾಧನೆ ತೋರಿದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Exit mobile version