ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಾವುದೇ ಸಮುದಾಯ ಶೈಕ್ಷಣಿಕವಾಗಿ ಪ್ರಗತಿಯಿಂದ ಸಾಧಿಸಿದಾಗ ಮಾತ್ರವೇ ಎಲ್ಲಾ ಸಾಮಾಜಿಕವಾಗಿ ಅಭ್ಯುದಯ ಸಾಧಿಸಲು ಸಾಧ್ಯವಿದೆ ಎಂದು ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಹೇಳಿದರು.
ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ಗೋಳಿಹೊಳೆ ಶಾಖೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಖಾ ವ್ಯಾಪ್ತಿಯ ಕೊರಗ ಸಮುದಾಯದ ಮಕ್ಕಳಿಗೆ ವಸ್ತ್ರ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್. ರಾಜು ಪೂಜಾರಿ ಅವರು ಮಾತನಾಡಿ ಗೋಳಿಹೊಳೆ ಶಾಖೆಯಲ್ಲಿ ಪ್ರಾರಂಭದಿಂದಲೂ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಕೊರಗ ಸಮುದಾಯದ ಮಕ್ಕಳಿಗೆ ವಸ್ತ್ರ, ಪ್ರೋತ್ಸಾಹಧನವನ್ನು ನೀಡಲಾಗುತ್ತಿದ್ದು ಮುಂದಿನ ವರ್ಷಗಳಲ್ಲಿಯೂ ಈ ಯೋಜನೆಯನ್ನು ಮುಂದುವರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಹಕಾರಿಯ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರಾದ ರಾಮಕೃಷ್ಣ ಖಾರ್ವಿ ಉಪಸ್ಥಿತರಿದ್ದರು. ಎಸ್ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಸ್ವಾಗತಿಸಿ, ಸೌಹಾರ್ದದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಂದಿಸಿದರು. ಶಾಖಾ ವ್ಯವಸ್ಥಾಪಕ ರಾಘವೇಂದ್ರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.