ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಅಧ್ಯಕ್ಷರ ಮನೆಗಳಲ್ಲಿಯೂ ಬಿಜೆಪಿ ಬಾವುಟ ಧ್ವಜಾರೋಹಣ ಮಾಡಲಾಯಿತು.
ವಿವಿಧ ಬೂತ್ ಅಧ್ಯಕ್ಷರ ಮನೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸೇರಿದಂತೆ ಬಿಜೆಪಿಯ ವಿವಿಧ ನಾಯಕರು ಭಾಗವಹಿಸಿದ್ದರು.