Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷ ಗಿರಿಗೌಡ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಗಿರಿಗೌಡ ಅವರಿಗೆ ಬೈಂದೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಭಿನಂದಿಸಿ ಶಿಕ್ಷಕರ ಸಮಸ್ಯೆ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಪ್ರಶಸ್ತಿ ವಿಜೇತ ಶ್ರೀರಾಂಪುರದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಗ್ರೇಡ್ -1ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಉಪ್ಪುಂದ ಜೂನಿಯರ್ ಕಾಲೇಜಿನ ಪ್ರಭಾರ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಬಾಡ, ಬೈಂದೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಶ್ರೀರಾಂಪುರದ ಶಾಲೆಯ ಶಿಕ್ಷಕ ವೃಂದದವರು ಹಾಗೂ ಸ್ಥಳೀಯ ವಸತಿ ಗೃಹದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Exit mobile version