ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಲೋಪದೋಷಗಳ ಬಗ್ಗೆ ಚರ್ಚಿಸುವ ಪುರಸಭೆ ಆಡಳಿತ ವ್ಯವಸ್ಥೆ ತನ್ನದೆ ಕಟ್ಟಡಕ್ಕೆ ಪಾರ್ಕಿಂಗ್ ಹೊಂದಿಲ್ಲ ಎಂದು ಮಾಜಿ ಸದಸ್ಯ ಕೇಶವ ಭಟ್ ಆರೋಪಿಸಿದ್ದಾರೆ.
ಹೊಸ ಬಸ್ ನಿಲ್ದಾಣದ ಬಳಿಯಿರುವ ಪುರಸಭೆ ವಾಣಿಜ್ಯ ಸಂಕೀರ್ಣ ಕಟ್ಟಡಕ್ಕೆ ಪಾರ್ಕಿಂಗ್ ಇಲ್ಲ. ಕಟ್ಟಡ ನಿರ್ಮಿಸುವಾಗ ಪಾರ್ಕಿಂಗ್ ನಿಯಮಾವಳಿ ಅನುಸರಿಸಿಲ್ಲ ರಸ್ತೆಗೆ ತಾಗಿಕೊಂಡಿರುವ ಕಟ್ಟಡ ಇದಾಗಿದ್ದು ವಾಹನಗಳು ಪಾರ್ಕಿಂಗ್ಗೆ ರಸ್ತೆಯಲ್ಲಿ ನಿಲ್ಲಬೇಕು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ನಿಯಮಾವಳಿ ಉಲ್ಲಂಘಿಸಿ ಕಟ್ಟಡ ನಿರ್ಮಿಸಿ ಪಾರ್ಕಿಂಗ್ ಲೋಪದೋಷಗಳ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.