Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಡಿಎಂ ಆಯುರ್ವೇದ ಕಾಲೇಜು & ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ನೂತನ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಅವರು ಅಧಿಕಾರ ಸ್ವೀಕರಿಸಿದರು.

ಡಾ. ನಾಗರಾಜ ಎಸ್. ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬಿ.ಎ.ಎಮ್.ಎಸ್. ಪದವಿ ಪಡೆದು ಸ್ನಾತಕೋತ್ತರ ಹಾಗೂ ಪಿಎಚ್.ಡಿ. ಪದವಿಗಳನ್ನು ಗುಜರಾತ್ ಆಯುರ್ವೇದ ಯುನಿವರ್ಸಿಟಿಯಲ್ಲಿ ಪಡೆದಿರುತ್ತಾರೆ. ಇವರು ರೋಗನಿಧಾನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ಹಾಗೂ ಪಿಎಚ್.ಡಿ ಅಧ್ಯಯನ ಕೇಂದ್ರದ ಸಹಾಯಕ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 21ವರ್ಷಗಳಿಂದ ಕಾಲೇಜು ಹಾಗೂ ಆಸ್ಪತ್ರೆಯ ವಿವಿಧ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿ ಕಾಲೇಜು ಹಾಗೂ ಆಸ್ಪತ್ರೆಯ ಏಳಿಗೆಗೆ ಶ್ರಮಿಸುತ್ತಿದ್ದಾರೆ.  ಬೈಂದೂರು ತಾಲೂಕಿನ ಯಡ್ತರೆಯವರಾದ ಡಾ. ನಾಗರಾಜ ಅವರು ಪ್ರಸ್ತುತ ಉಡುಪಿಯಲ್ಲಿ ನೆಲೆಸಿದ್ದಾರೆ.

ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ ಅವರಿಂದ ಡಾ ನಾಗರಾಜ ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

 

Exit mobile version