Kundapra.com ಕುಂದಾಪ್ರ ಡಾಟ್ ಕಾಂ

ಮಂಗಳೂರು ಮಹಾನಗರ ಪಾಲಿಕೆಯಿಂದ ನಾಗರಾಜ ಖಾರ್ವಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು 1 ಕಿ.ಮೀ.ದೂರವನ್ನು 25 ನಿಮಿಷ 16 ಸೆಕೆಂಡುಗಳಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಪದವೀಧರ ಶಿಕ್ಷಕ ನಾಗರಾಜ ಖಾರ್ವಿ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಈಜು ತರಬೇತುದಾರರಾದ ಬಿ.ಕೆ.ನಾಯ್ಕ್, ಕಾರ್ಪೋರೇಟರ್ಗಳಾದ ಶೋಭ ರಾಜೇಶ್, ಜಯಲಕ್ಷ್ಮೀ ಶೆಟ್ಟಿ, ಶರತ್, ಮಾಜಿ ಕಾರ್ಪೋರೇಟರ್ ರಾಧಾಕೃಷ್ಣ, ಈಜುಕೊಳದ ವ್ಯವಸ್ಥಾಪಕರಾದ ರಮೇಶ್ ಬಿಜೈ, ನಿಜಗುಣ ದೊಡ್ಡಮನಿ, ನಾಗೇಂದ್ರನಾಥ್ ಉಪಸ್ಥಿತರಿದ್ದರು.

ನಾಗರಾಜ ಖಾರ್ವಿ ಸ.ಹಿ.ಪ್ರಾ.ಶಾಲೆ ಕಂಚುಗೋಡು, ಸ.ಹಿ.ಪ್ರಾ.ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಡಾ.ಟಿ.ಎಂ.ಎ.ಪೈ, ಶಿಕ್ಷಣ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದಾರೆ.

Exit mobile version