Kundapra.com ಕುಂದಾಪ್ರ ಡಾಟ್ ಕಾಂ

ಅ.29: ಉಪ್ಪುಂದದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೈಂದೂರು: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗದ ಸಹಭಾಗಿತ್ವದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ವತ್ರೆ, ಶ್ರೀ ರಾಮ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಕುಂದಾಪುರ ಹಾಗೂ ಲಯನ್ಸ್ ಕ್ಲಬ್ ಉಪ್ಪುಂದ-ಬೈಂದೂರು  ಇವುಗಳ ಸಂಯಕ್ತಾಶ್ರಯದಲ್ಲಿ ’ಉಚಿತ ನೇತ್ರ ತಪಾಸಣಾ ಶಿಬಿರ’ ಅ.29ರ ಶನಿವಾರ ಉಪ್ಪುಂದದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ನಡೆಯಲಿದೆ.

ಶಿಬಿರದಲ್ಲಿ ನೇತ್ರ ತಪಾಸಣೆ, ಅಗತ್ಯವಿರುವವರಿಗೆ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಹಾಗೂ ಲೆನ್ಸ್ ಅಳವಡಿಕೆಯ ಸೌಲಭ್ಯವನ್ನು ಉಚಿತವಾಗಿ ಮಾಡಲಾಗಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version