ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ /ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ , ಮೆಟ್ರಿಕ್ ನಂತರದ ವಿದ್ಯಾರ್ಥಿ
ವೇತನ ಶುಲ್ಕ ವಿನಾಯಿತಿ, ವಿದ್ಯಾ ಸಿರಿ-ಊಟ ಮತ್ತು ವಸತಿ ಸಹಾಯಯೋಜನೆ ಮತ್ತು ನರ್ಸಿಂಗ್ ವಿದ್ಯಾಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು http://www.ssp.postmatric.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ-8050770005/8050770004, ಇ-ಮೇಲ್ bcwd.scholarship@karnataka.gov.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.