Kundapra.com ಕುಂದಾಪ್ರ ಡಾಟ್ ಕಾಂ

ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನ ಯೂತ್‌ ರೆಡ್‌ಕ್ರಾಸ್‌ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಹಭಾಗಿತ್ವದೊಂದೊಗೆ ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ ಜರಗಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ ವಿಶ್ವ ವಿದ್ಯಾನಿಲಯದ ಸಾರ್ವಜನಿಕ ಆರೋಗ್ಯ ವಿಭಾಗದ  ಮುಖ್ಯಸ್ಥ  ಡಾ| ರಾಮಚಂದ್ರ ಕಾಮತ್‌ ಉಪಸ್ಥಿತರಿದ್ದು,  ಪ್ರಥಮ ಚಿಕಿತ್ಸೆ ಮಾಡುವುದರಿಂದ ಹಲವಾರು ಜೀವಗಳನ್ನು ಉಳಿಸ ಬಹುದೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.ಕಾರ್ಯಕ್ರಮದಲ್ಲಿ  ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್‌. ಜಯಕರ ಶೆಟ್ಟಿ, ಸಂಯೋಜಕ ಮುತ್ತಯ್ಯ ಶೆಟ್ಟಿ, ಕಾರ್ಯಕ್ರಮದ ಸಂಚಾಲಕ ಸತ್ಯ ನಾರಾಯಣ ಹಾಗೂ ವಿದ್ಯಾರಾಣಿ ಉಪಸ್ಥಿತರಿದ್ದರು.

ರಕ್ಷಿತಾ  ಸ್ವಾಗತಿಸಿ, ಸ್ವಸ್ತಿಕ ವಂದಿಸಿ ಮತ್ತು  ಗೀತಾ ನಿರೂಪಿಸಿದರು.

Exit mobile version