Kundapra.com ಕುಂದಾಪ್ರ ಡಾಟ್ ಕಾಂ

ಏಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಆಟೋ ಚಾಲಕರಿಗೆ ದಿನಸಿ, ತರಕಾರಿ ಹಾಗೂ ಆಯುರ್ವೇದದ ಔಷದಿಗಳ ಕಿಟ್ ಗುರುವಾರ ಕುಟೀರದ ಆವರಣದಲ್ಲಿ ವಿತರಿಸಲಾಯಿತು.

ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಕಿಟ್ ವಿತರಿಸಿ ಮಾತನಾಡಿ, ಕುಟೀರದ ವತಿಯಿಂದ ಈತನಕ ಅಗತ್ಯವುಳ್ಳವರನ್ನು ಗುರುತಿಸಿ 100ಕ್ಕೂ ಹೆಚ್ಚು ಕಿಟ್ಗಳನ್ನು ವಿತರಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಸಾಧ್ಯವಾದಷ್ಟು ನೆರವು ನೀಡಲಾಗಿದೆ. ಲಾಕ್ಡೌನ್ ಸಡಿಲಗೊಳಿಸಿರುದರಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದರು.

Exit mobile version