Site icon Kundapra.com ಕುಂದಾಪ್ರ ಡಾಟ್ ಕಾಂ

ನಾವುಂದದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ನಾವುಂದ ರೈಲ್ವೇ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕೊಡೇರಿ ಬೈಲ್ಕಿನಬಾಗಿಲು ನಿವಾಸಿ ಜಾಫರ್ ಸಾದಿಕ್ (42) ಎಂಬಾತನನ್ನು ಸೋಮವಾರ ಸಂಜೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ವ್ಯಕ್ತಿಯಿಂದ ರೂ.15,000 ಮೌಲ್ಯದ ಅರ್ಧ ಕೆಜಿ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ, ಮೊಬೈಲ್ ಪೋನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಅವರ ಮಾಹಿತಿ ಮೇರೆಗೆ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಬೈಂದೂರು ಪೊಲೀಸ್ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version