Site icon Kundapra.com ಕುಂದಾಪ್ರ ಡಾಟ್ ಕಾಂ

ಏಳಜಿತ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಏಳಜಿತ ಶಾಲೆಯ ಒಟ್ಟು 139 ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ಕುಟೀರದಿಂದ ನೋಟ್ ಬುಕ್ ಉಚಿತವಾಗಿ ವಿತರಿಸಲಾಯಿತು.

ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಗೌರವ ಕಾರ್ಯದರ್ಶಿ ಹಾಗೂ ಏಳಜಿತ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಜ್ಯೋತಿ ಎಚ್.ಎಸ್ ದೀಪ ಬೆಳಗಿ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವ ಮೂಲಕ ಗುರುವಾರ ಚಾಲನೆ ನೀಡಿದರು. ಪ್ರತಿ ವಿದ್ಯಾರ್ಥಿಗಳಿಗೂ ತಲಾ ಒಂದು ಸೆಟ್ ನೋಟ್ ಬುಕ್‌ಗಳನ್ನು ವಿತರಿಸಲಾಯಿತು.

Exit mobile version