ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಛಾಯಾಗ್ರಾಹಕ ಹಾಗೂ ಅವರ ಪುತ್ರ ಗಂಭೀರ ಗಾಯಗೊಂಡು, ಹಿಂಬದಿ ಕುಳಿತಿದ್ದ ಇನ್ನೊಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತುಮಕೂರು ಜಿಲ್ಲಾ ಶಿರಾ ತಾಲೂಕಿನ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಂಭೀರಗೊಂಡವರನ್ನು ಕುಂದಾಪುರದ ಹಿರಿಯ ಛಾಯಾಗ್ರಾಹಕ ಹೇರೂರು ಅಶೋಕ ಕುಮಾರ್ ಶೆಟ್ಟಿ (58) ಹಾಗೂ ಅವರ ಪುತ್ರ ಪನ್ನಗ (24) ಎಂದು ಗುರುತಿಸಲಾಗಿದೆ.
