Site icon Kundapra.com ಕುಂದಾಪ್ರ ಡಾಟ್ ಕಾಂ

ಅಂಪಾರು ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಂಪಾರು ರೋಟರಿ ಕ್ಲಬ್‌ನಿಂದ ಪದಗ್ರಣ ಕಾರ್ಯಕ್ರಮ ಇಲ್ಲಿನ ವಂಡ್ಸೆ ಅತ್ರಾಡಿ ವಿಜಯಾ ಮಕ್ಕಳ ಕೂಟ ಆಂಗ್ಲಾ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಜರುಗಿತು.

ರೋಟರಿ ನೂತನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಸಹಾಯಕ ರಾಜ್ಯಪಾಲ ಧನಂಜಯ ಪ್ರಭು ಪದಗ್ರಹಣ ನೆರವೇರಿಸಿದರು. ವಲಯ ಸೇನಾನಿ ಗಂಗಾಧರ ಉಡುಪ ಸಂಸ್ಥೆ ಕೈಪಿಡಿ ಧರ್ಪಣ ಬಿಡುಗಡೆ ಮಾಡಿದರು.

ವಂಡ್ಸೆ ಗ್ರಾಪಂ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, 43 ಬಾರಿ ರಕ್ತದಾನ ಮಾಡಿದ ಸಮಾಜ ಸೇವಕ ರಾಘವೇಂದ್ರ ನೆಂಪು ಅವರನ್ನು ಸನ್ಮಾನಿಸಲಾಯಿತು. ನೂತನ ರೋಟರಿ ಸದಸ್ಯರಾಗಿ ನಿವೃತ್ತ ಪ್ರೌಢಶಾಲಾ ಶಿಕ್ಷಕ ನರಸಿಂಹ ನಾಯ್ಕ್ ಅವರ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ರೋಟರಿ ನಿಕಟಪೂರ್ವ ಅಧ್ಯಕ್ಷ ಸತೀಶ್ ಶೆಟ್ಟಿ ಮೂಡುಬಗೆ, ಮಾಜಿ ಕಾರ‍್ಯದರ್ಶಿ ಸುರೇಂದ್ರ ಶೆಟ್ಟಿ ಇದ್ದರು.

ಆನಂದ ಮಾಸ್ಟರ್ ಸ್ವಾಗತಿಸಿದರು. ದಿನೇಶ್ ಪೂಜಾರಿ ಗೊರಟೆ ಪ್ರಾರ್ಥಿಸಿದರು. ದೇವರಾಜ್ ಪುತ್ರನ್ ನಿರೂಪಿಸಿದರು. ನೂತನ ಕಾರ‍್ಯದರ್ಶಿ ಗುರುರಾಜ ಶೆಟ್ಟಿ ವಂದಿಸಿದರು.

Exit mobile version