Kundapra.com ಕುಂದಾಪ್ರ ಡಾಟ್ ಕಾಂ

ಕಲಾಕ್ಷೇತ್ರದ ಮೆಟ್ಟಿಲ ಮೇಲೆ ಕುಳಿತು ಅಧಿಕಾರ ಸ್ವೀಕರಿಸಿದ ಸಚಿವ ವಿ. ಸುನಿಲ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಅವರ ನಡೆ ಗಮನ ಸೆಳೆಯಿತು.

ರವೀಂದ್ರ ಕಲಾಕ್ಷೇತ್ರದ ಮುಂಭಾಗದಲ್ಲಿ ಭಾರತಾಂಬೆ ಮತ್ತು ನಾಡ ದೇವತೆಯ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದ ಬಳಿಕ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆಯೇ ಕುಳಿತು ಕಡತಕ್ಕೆ ಸಹಿ ಹಾಕಿ ಇಲಾಖಾ ಕಾರ್ಯ ಆರಂಭಿಸಿದರು.

ಈ ಸಂದರ್ಭ 2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಪುರಸ್ಕೃತೆ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆ ಕ್ಯಾತರ ಮತ್ತು ಬಿಬಿ ಕೊರಂಟೈನ್ ಪ್ರಶಸ್ತಿಗೆ ಭಾಜನರಾದ ಹೆಚ್ ವಿ ವೆಂಕಟಸುಬ್ಬಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಅಧಿಕಾರ ಸ್ವೀಕರಿಸಿದ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಯಲ್ಲಿ ಪುಸ್ತಕ ಖರೀದಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಸಾಹಿತಿ ಮತ್ತು ಕಲಾವಿದರೊಂದಿಗೆ ಅಲ್ಲಿಯೇ ಇದ್ದ ಕ್ಯಾಂಟೀನ್ ನಲ್ಲಿ ಕಾಫಿ ಸೇವನೆ ಮಾಡಿದರು.

Exit mobile version