Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಇಂದುಶ್ರೀ ಮಹಿಳಾ ಸಂಘದಿಂದ ಸ್ವಚ್ಛತಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಧಾರ್ಮಿಕ ಕ್ಷೇತ್ರದ, ಪರಿಸರದ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಶ್ರೀ ಇಂದುಧರ ದೇವಾಲಯದ ಪರಿಸರ ಸ್ವಚ್ಛತೆಯನ್ನು ಇಲ್ಲಿನ ಶ್ರೀ ಇಂದುಶ್ರೀ ಮಹಿಳಾ ಸಂಘದ ವತಿಯಿಂದ ನಡೆಸಲಾಯಿತು.

ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಸದಸ್ಯರು ದೇವಸ್ಥಾನದ ಪರಿಸರ, ನಾಗದೇವರ ಸ್ವಾಮೀ ಹಾಗೂ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸಿದರು.

Exit mobile version