Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕ್ರಿಕೆಟ್‌ ಬೆಟ್ಟಿಂಗ್ ಮಾಡುತ್ತಿದ್ದ ಆರೋಪಿ ಸೆರೆ

ಕುಂದಾಪುರ: ಇಲ್ಲಿನ ಕಂಡ್ಲೂರು ಬಸ್‌ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮರದ ಅಡಿಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಕಾವ್ರಾಡಿ ಗ್ರಾಮದ ದೂಪದಕಟ್ಟೆ ನಿವಾಸಿ ಮಹೇಶ ಆಚಾರಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕೆ.ಪಿ.ಎಲ್‌ಕ್ರಿಕೆಟ್‌ಪಂದ್ಯಾಟದ ನಮ್ಮ ಶಿವಮೊಗ್ಗ ಹಾಗೂ ಬಿಜಾಪುರ ಬುಲ್ಸ್‌ತಂಡಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್‌ನಡೆಸುತ್ತಿದ್ದುದನ್ನು ಖಚಿತಪಡಿಸಿಕೊಂಡು ಗಂಟೆಗೆ ದಾಳಿ ನಡೆಸಿದ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ್‌ ಪಿ.ಎಂ. ಅವರು , ಆತನನ್ನು ಬಂಧಿಸಿ ಮೊಬೆ„ಲ್‌, ರೂ.15 ಸಾವಿರ ನಗದು, ಚೆವರ್‌ಲೆಟ್‌ ಕಾರು ಹಾಗೂ ಇತರ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version