Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪನೆಗೆ ಚಿಂತನೆ: ಸಚಿವ ಸುನಿಲ್ ಕುಮಾರ್

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ:
ಕುಂದಾಪ್ರ ಕನ್ನಡ ಭಾಷೆಗೆ ಪ್ರಾಧಾನ್ಯತೆ ದೊರಕಿಸಿಕೊಡುವ ಉದ್ದೇಶದಿಂದ ಅಕಾಡೆಮಿ ಸ್ಥಾಪಿಸುವ ಚಿಂತನೆ ನಮ್ಮ ಮುಂದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಅವರು ಸೋಮವಾರ ಕುಂದಾಪುರ ಬಿಜೆಪಿ ಕಛೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿ ಕುಂದಾಪ್ರ ಕನ್ನಡ ಅಕಾಡೆಮಿ ಸ್ಥಾಪಿಸಬೇಕೆಂಬ ಮನವಿಯನ್ನು ಈ‌ ಹಿಂದೆಯೂ ಬೇರೆ ಬೇರೆ ಸಂದರ್ಭದಲ್ಲಿ ಮಾಡಿದ್ದೆವು. ಈಗ ಆ ಬಗ್ಗೆ ಸಾಧ್ಯಸಾಧ್ಯತೆಗಳನ್ನು‌ ನೋಡಿಕೊಂಡು ಅಕಾಡೆಮಿ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದರು.

ಈ ಸಂದರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಕುಂದಾಪುರ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ ► ಕುಂದಗನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಮನವಿhttps://kundapraa.com/?p=51024 .

Exit mobile version