Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವವರಿಗೆ 2000 ರೂ. ಪರಿಹಾರ ಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆಗಸ್ಟ್ 31 ರೊಳಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಮೊದಲು ಅರ್ಜಿ ಸಲ್ಲಿಸಿ ಪರಿಹಾರ ಮೊತ್ತ ಬಾರದಿರುವವರು ಅರ್ಜಿ ಸಲ್ಲಿಸಬಹುದಾಗಿದೆ

ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿಯಲ್ಲಿ ಹಲವಾರು ಆರ್ಥಿಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹರು ನಿಗಮದ ವೆಬ್‌ಸೈಟ್: https://lidkar.online ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ಕಚೇರಿ ಅಥವಾ ಮೊಬೈಲ್ ಸಂಖ್ಯೆ: 6362891017 ನ್ನು ಸಂಪರ್ಕಿಸಬಹುದೆಂದು ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version