ಕುಂದಾಪುರ: ಅನಿಯಮಿತ ವಿದ್ಯುತ್ ನಿಲುಗಡೆ ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂದಾಪುರ ವಿಧಾನಸಭಾ ಕ್ಷೇತ್ರದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.
ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕುಂದಾಪುರ ವಿಧಾನಸಭಾ ಅಧ್ಯಕ್ಷ ಇಲಿಯಾಸ್ ಸಾಸ್ತಾನ ಮಾತನಾಡಿ ಲೋಡ್ ಶೆಡ್ಡಿಂಗ್ ನೆಪದಲ್ಲಿ ಬೇರೆಡೆಗಿಂತ ಕುಂದಾಪುರ ಭಾಗದಲ್ಲಿ ಹೆಚ್ಚು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಹೀಗೆ ಮನಬಂದಂತೆ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೊಂದು ಪರ್ಯಾಯ ವ್ಯವಸ್ಥೆ ಮಾಡಬೇಕು ಹಾಗೂ ವಿದ್ಯುತ್ ಕಡಿತಗೋಳಿಸುಲು ನಿರ್ದಿಷ್ಟ ಸಮಯವನ್ನು ನಿಗದಿಗೊಳಿಸಬೇಕು ಎಂದವರು ಆಗ್ರಹಿಸಿದರು.
ಕುಂದಾಪುರದ ಶಾಸ್ತ್ರೀವೃತ್ತದಿಂದ ಹೊರಟ ಪ್ರತಿಭಟನಾಕಾರರು ಮೆಸ್ಕಾಂ ಮುಖ್ಯ ಕಛೇರಿಗೆ ತೆರಳಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಸ್ಡಿಎಫ್ಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಸಿರಾಜ್ ಕೋಟೇಶ್ವರ, ನವಾಜ್ ಕುಂದಾಪುರ, ಪಿಎಫ್ಐ ತಾಲೂಕು ಅಧ್ಯಕ್ಷ ಮೌಸಮ್ ಮೌಲಾನ ಮುಂತಾದವರು ಭಾಗವಹಿಸಿದ್ದರು.