Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿ ಕರುಣಾಕರ ಕೋಟೆಗಾರ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿ ಮಣಿಪಾಲದ ಎಂಐಟಿಯ ಪ್ರೊಫೆಸರ್ ಪ್ರೊ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ.

ಪ್ರೊ. ಕರುಣಾಕರ ಕೋಟೆಗಾರ್ ಅವರು ಎಂಐಟಿ ಮಣಿಪಾಲದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿದ್ದು, ಕಳೆದು 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಜುಲೈ 2020ರಂದು ನೇಮಗೊಂಡಿದ್ದರು.

ಅವರು ಇತ್ತಿಚಿಗೆ ರಾಷ್ಟ್ರೀಯ ಶಿಕ್ಷಣ ನೀತಿ – 2020ರ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ಸರಣಿ ವೀಡಿಯೋವನ್ನು ಮಂಗಳೂರು ವಿಶ್ವವಿದ್ಯಾನಿಲಯ ವೆಬ್ಸೈಟ್ ಮೂಲಕ ಬಿಡುಗಡೆಗೊಳಿಸಿದ್ದರು. ಕುಂದಾಪ್ರ ಡಾಟ್ ಕಾಂ ಮೂಲಕವೂ ವೀಡಿಯೋ ಸರಣಿ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ವೀಡಿಯೋ ಸರಣಿ ಮಾಡಿದ್ದರು.

ಪ್ರೋ. ಕರುಣಾಕರ ಕೋಟೇಗಾರ್ ಅವರ ರಾಷ್ಟ್ರೀಯ ಶಿಕ್ಷಣ ನೀತಿ ಬಗೆಗಿನ ವೀಡಿಯೋ ಸರಣಿ

ಇದನ್ನೂ ಓದಿ:
► ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯರಾಗಿ ಡಾ. ಕರುಣಾಕರ ಕೊಟೇಗಾರ್ ನೇಮಕ – https://kundapraa.com/?p=39338 .

Exit mobile version