Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನೀರಿನ ಸೆಳೆತಕ್ಕೆ ಸಿಲುಕಿ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ಮೊವಾಡಿ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ. ತ್ರಾಸಿ ಹೋಲಿಕ್ರಾಸ್ ಸಮೀಪದ ನಿವಾಸಿ ಮಹೇಂದ್ರ (24) ಮೃತ ಯುವಕ.

ಭಾನುವಾರ ಸಂಜೆಯ ವೇಳೆಗೆ ಮೊವಾಡಿಯ  ಸೇತುವೆ ಬಳಿಯ ಸೌಪರ್ಣಿಕಾ ನದಿ ತೀರಕ್ಕೆ ತೆರಳಿದ್ದ ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಈ ವೇಳೆ ನೀರಿನ ಸೆಳೆತ ಜಾಸ್ತಿ ಇದ್ದುದರಿಂದ ಮಹೇಂದ್ರ ನೀರುಪಾಲಾಗಿದ್ದಾನೆ. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ.

ನೀರುಪಾಲಾದ ಯುವಕನಿಗಾಗಿ ರಾತ್ರಿಯ ತನಕವೂ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದ್ದು, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರವೂ ಹುಡುಕಾಟ ಮುಂದುವರಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ, ಸ್ಥಳೀಯರು ದೋಣಿ ಮೂಲಕ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Exit mobile version