Kundapra.com ಕುಂದಾಪ್ರ ಡಾಟ್ ಕಾಂ

ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ, ಪ್ರತಿರಕ್ಷಣಾ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುಸದ್ದಿ.
ಬೈಂದೂರು:
ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಸಂಘ ಕೊಯಾನಗರ ಘಟಕದ ಸವ೯ಸದಸ್ಯರ ಸಭೆಯು ಸ್ಥಳೀಯ ಮೆಸ್ಕಾಂ ಕಚೇರಿ ಬಳಿ ಜರಗಿತು.

ಕಾಮಿ೯ಕ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್ಕಾರ್ಮಿಕ ಇಲಾಖೆಯಿಂದ ಕೊಡಮಾಡಿದ ಸುರಕ್ಷಾ ಕಿಟ್ ಮತ್ತು ಪ್ರತಿರಕ್ಷಣಾ ಕಿಟ್ ಗಳನ್ನು ಕಾರ್ಮಿಕರಿಗೆ ವಿತರಿಸಿದರು,

ಕಿಟ್ ವಿತರಿಸಿ ಮಾತನಾಡಿದಕಾರ್ಮಿಕ ಮುಖಂಡ ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಕಾರ್ಮಿಕ ಸಂಘದ ಮೂಲಕವೇ ಅಹಾರ ಕಿಟ್ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಮಾಡಿದ ಹೋರಾಟದ ಫಲವಾಗಿ ಇಂದು ನಮ್ಮ ಸಂಘಟನೆಯಿಂದ ಈ ಕಿಟ್ ಗಳನ್ನು ವಿತರಿಸಲು ಸಾಧ್ಯವಾಯಿತು. ಇದು ನಮ್ಮ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು.

ಕಾಕಾರ್ಮಿಕ ಮುಖಂಡ ವೆಂಕಟೇಶ್ ಕೋಣಿ ಮಾತನಾಡಿ, ಇತ್ತೀಚೆಗೆ ಜರಗಿದ ‘ಕಾಮಿ೯ಕ ಅದಾಲತ್’ ಸಭೆಯಲ್ಲಿ ಸಲ್ಲಿಸಿದ ಕಾರ್ಮಿಕರ ವಿವಿಧ ಸೌಲಭ್ಯಗಳ ಬಾಕಿ ನಿಂತಿರುವ ಅಜಿ೯ಗಳಿಗೆ ಈ ಕೂಡಲೆ ಹಣ ಬಿಡುಗಡೆ ಮಾಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು. ಸಂಘದ ಅಧ್ಯಕ್ಷ ಚಿಕ್ಕಯ್ಯ ದೇವಾಡಿಗ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಯ೯ದಶಿ೯ ವಿಜಯ ಬಿ. ಕಿರಿಮಂಜೇಶ್ವರ ಕಾಯ೯ಕ್ರಮ ನಿರೂಪಿಸಿದರು.

Exit mobile version