Kundapra.com ಕುಂದಾಪ್ರ ಡಾಟ್ ಕಾಂ

ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ: ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಬೈಂದೂರು:
ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ನಿ. ಬೈಂದೂರು ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆ ಸಹಕಾರಿಯ ಕಛೇರಿ ಆವರಣದಲ್ಲಿ ನಡೆಯಿತು.

ಸಹಕಾರಿ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ವಹಿಸಿ ಮಾತನಾಡಿ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೋವಿಡ್ ಸಮಸ್ಯೆಯ ನಡುವೆಯೂ ಉತ್ತಮ ಸಾಧನೆ ಮಾಡಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತಿರುವುದು ಸದಸ್ಯರ ಪ್ರೋತ್ಸಾಹದಿಂದ ಸಾಧ್ಯವಾಗಿದೆ. ಈ ವರ್ಷದಲ್ಲಿ ಸದಸ್ಯರಿಗೆ ಶೇ. 8% ಡಿವಿಡೆಂಡ್ ಘೋಷಿಸಲಾಗಿದೆ ಎಂದರು.

ಉಪಾಧ್ಯಕ್ಷ ಗೋಪಾಲಕೃಷ್ಣ ಕೆ, ನಿರ್ದೇಶಕರಾದ ಭೀಮೇಶ ಕುಮಾರ್ ಎಸ್. ಜಿ, ಪ್ರಸಾದ ಪ್ರಭು, ಅರುಣ ಕುಮಾರ, ಯು. ಪ್ರಕಾಶ ಭಟ್ ಉಪ್ಪುಂದ, ರಾಜೇಶ ಪೈ, ಬಾಲಕೃಷ್ಣ ಪ್ರಭು, ಗೌರಿ ಮಂಗೇಶ್, ಮೋಹಿನಿ ಜಿ. ಶೆಟ್ಟಿ, ಗಣೇಶ ಗಾಣಿಗ ಹಾಜರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಎಂ. ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು.

Exit mobile version