ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಾಡಿಕೆಯಂತೆ ನಡೆಯುವ ಚಂಡಿಕಾಹವನವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬೆಳಗ್ಗೆ ಶ್ರೀ ದೇವತಾ ಪ್ರಾರ್ಥನೆಯೊಂದಿಗೆ ಯಜ್ಞ ಅನು?ನಗಳು ಪ್ರಾರಂಭಗೊಂಡಿತು. ಮಧ್ಯಾಹ್ನ ಯಜ್ಞ ಪೂರ್ಣಾಹುತಿ, ಮಹಾಮಂಗಳಾರತಿ, ಶ್ರೀ ದೇವಿಗೆ ಸಮರ್ಪಿಸಿದ ಹರಕೆ ಸೀರೆಗಳ ಏಲಂ ಹಾಗೂ ಮಹಾ ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಪುರೋಹಿತರ ನೇತೃತ್ವದಲ್ಲಿ ನಡೆಯಿತು. ದೇವಳದ ಧರ್ಮದರ್ಶಿಗಳು, ಅರ್ಚಕರು, ಸೇವಾದಾರರು, ಕುಳಾವಿ ಭಜಕರು, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.