Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಶಾರದೋತ್ಸವ ಸಮಿತಿಯಿಂದ ಕೆನರಾ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ಕೆ. ಕಾಳಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 47ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭಕ್ಕೆ ಶನಿವಾರ ಭೇಟಿ ನೀಡಿದ ಕೆನರಾ ಬ್ಯಾಂಕಿನ ಉಡುಪಿ ವಿಭಾಗೀಯ ಕಛೇರಿಯ ಸಹಾಯಕ ಮಹಾಪ್ರಬಂಧಕ ಕೆ. ಕಾಳಿ ಅವರನ್ನು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಜಿ.ನಾರಾಯಣ ಆಚಾರ್ಯ, ಅಧ್ಯಕ್ಷ ಸತೀಶ ಜಿ., ಕೆನರಾ ಬ್ಯಾಂಕಿನ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ, ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ ಯಾಜಿ, ಶ್ರೀ ಶಾರದೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ನಾಗರಾಜ ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Exit mobile version