Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಗೋವಿಂದ ಖಾರ್ವಿ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅಳವಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕು ಉಪ್ಪುಂದ ಗ್ರಾಮದ ಸಂಕದ ಬಾಗಿಲು ಗೋವಿಂದ ಖಾವಿ೯ ಅವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಸಾಹಿತಿಗಳಾದ ಉಪ್ಪುಂದ ರಮೇಶ್ ವೈದ್ಯ ಅವರು ಉದ್ಘಾಟನೆಯೊಂದಿಗೆ ನಾಮಫಲಕ ಅನಾವರಣಗೊಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಸೈನಿಕರಾದ ಚಂದ್ರಶೇಖರ ನಾವುಡರು ‘ಭಾರತ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಮತ್ತು ಉಪ್ಪುಂದ ಗೋವಿಂದ ಖಾವಿ೯ ಅವರ ಸೇವೆ’ ಎನ್ನುವ ವಿಚಾರದಲ್ಲಿ ಉಪನ್ಯಾಸ ನೀಡಿದರು.

ಕಾಯ೯ಕ್ರಮದ ಅಧ್ಯಕ್ಷತೆಯನ್ನು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ಖಾವಿ೯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉದ್ಯಮಿ ಶರತ್ ಶೆಟ್ಟಿ ಉಪಸ್ಥಿತರಿದ್ದರು. ಕಾಯ೯ಕ್ರಮಕ್ಕೆ ಸೇವಾ ಟ್ರಸ್ಟ್ (ರಿ) ಮೂಡುಗಿಳಿಯಾರು ಹಾಗೂ ಗೋವಿಂದ ಖಾರ್ವಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಹಕಾರ ನೀಡಿದರು. ಅಧ್ಯಾಪಕ ರವೀಂದ್ರ ಹೆಚ್ ಕಾರ್ಯಕ್ರಮ ನಿರೂಪಿಸಿದರು. ಸ್ವರಾಜ್ಯ 75 ಕಾಯ೯ಕ್ರಮ ಸಂಚಾಲಕರಾದ ಪ್ರದೀಪ ಕುಮಾರ್ ಬಸ್ರೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಸನ್ನ ಖಾರ್ವಿ ವಂದಿಸಿದರು.

Exit mobile version