Kundapra.com ಕುಂದಾಪ್ರ ಡಾಟ್ ಕಾಂ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಒಂದಾದ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ಮೂರು ಸಹಕಾರಿ ಸಂಘಗಳಲ್ಲಿ ಒಂದು ಎಂದು ಗುರುತಿಸಿ ಕೊಂಡು ತನ್ನ ಸದಸ್ಯರಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ೧೫ ವರ್ಷಗಳಿಂದ ಸತತವಾಗಿ ಪ್ರಶಸ್ತಿ ಪಡೆಯುವುದರಲ್ಲಿ ನಿರಂತರ ಸಾಧನೆ ಬಗ್ಗೆ ಆಡಿಟ್ ಎ ವರ್ಗಿಕರಣ ಹೊಂದಿದ್ದು, ಜಿಲ್ಲೆಯಲ್ಲೇ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ, ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಎನ್. ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ ಪೈ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್, ಸುರೇಶ ಶ್ಯಾನುಭಾಗ್, ವ್ಯವಸ್ಥಾಪಕ ಹಾವಳಿ ಬಿಲ್ಲವ ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮಮತಾ ವಿ. ಮಯ್ಯ ಉಪಸ್ಥಿತರಿದ್ದರು.

Exit mobile version