Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸರ್ಕಾರ ಆದೇಶದಂತೆ ಮುಜರಾಯಿ ಇಲಾಖೆಯ ಅಧೀನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು.

ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಹೆಚ್. ಎಸ್. ಗೋಪೂಜೆ ನೆರವೇರಿಸಿ ಮಾತನಾಡಿ, ಗೋವಿನ ಎಲ್ಲಾ ಉತ್ಪನ್ನಗಳು ಕೂಡ ಸಂಪತ್ತಾಗಿದ್ದು, ಎಲ್ಲಾ ರೀತಿಯ ಔಷಧಿಗಳು ಸಿಗುತ್ತಿದೆ. ಗೋಧಾಮದ ಮೂಲಕ ಲೋಕಕಲ್ಯಾಣ ನಡೆಯಲಿ. ಗೋಪೂಜೆ ಬಗೆಗಿನ ವಿಜ್ಞಾನದ ಸಂಗತಿ ತಿಳಿದಿದ್ದರಿಂದ ಹಿಂದಿನ ಕಾಲದಲ್ಲಿ ಮನೆಯಲ್ಲಿನ ತಾಯಿ ಮಕ್ಕಳಿಗೆ ಗೋವಿನ ಮಹತ್ವವನ್ನು ತಿಳಿಯ ಪಡಿಸುತ್ತಿದ್ದರು ಎಂದರು.

ಈ ಸಂದರ್ಭದಲ್ಲಿ ದೇವಳದ ಪ್ರದಾನ ಅರ್ಚಕ ಪ್ರಕಾಶ್ ಉಡುಪ, ದೇವಸ್ಥಾನ ಮಾಜಿ ಆಡಳಿತ ಧರ್ಮದರ್ಶಿ ಜಯರಾಮ ಶೆಟ್ಟಿ, ವಿಶ್ವ ಹಿಂದೂ ಪರಿಷತ್ ಬೈಂದೂರು ಘಟಕದ ಅಧ್ಯಕ್ಷ ಸುಧಾಕರ ಶೆಟ್ಟಿ ನೆಲ್ಯಾಡಿ, ಉಪ್ಪುಂದ ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ ದೇವಾಡಿಗ, ದೇವಳದ ಅರ್ಚಕ ಯು.ಸಂದೇಶ್ ಭಟ್, ಹಾಗೂ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಭಿಮಾನಿಗಳು ಗೋಪೂಜೆಯಲ್ಲಿ ಭಾಗವಹಿಸಿದ್ದರು.

Exit mobile version