Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಇ-ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಮರಳು ವಿತರಿಸಲಾಗುತ್ತಿದೆ. ಮರಳು ಅವಶ್ಯಕತೆ ಇರುವವರು ಅಂತರ್ಜಾಲ https://udupiesand.com/ ಸಂದರ್ಶಿಸಿ, ಹೆಸರು ಹಾಗೂ ವಿಳಾಸ ದಾಖಲಿಸಿ ಬೇಕಾಗಿರುವ ಮರಳಿನ ಪ್ರಮಾಣವನ್ನು ನಮೂದಿಸಿ, ಆನ್ಲೈನ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ.

ಇದೊಂದು ಸರಳ ಹಾಗೂ ಪಾರದರ್ಶಕ ಪ್ರಕ್ರಿಯೆಯಾಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2572333 ಅಥವಾ ಸ್ಯಾಂಡ್ ಆಪ್ ಕಾಂಟ್ಯಾಕ್ಟ್ ನಂ: 6366745888, 6364024555, 6366871888 ಅನ್ನು ಸಂಪರ್ಕಿಸುವತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version