Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್‌ಕಾರ್ಸ್ ಕಾಲೇಜು : ನಾಯಕತ್ವ ತರಬೇತಿ

ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಜೇಸಿ ಸಪ್ತಾಹದ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ಸಹಭಾಗಿತ್ವದಲ್ಲಿ ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು. ಈ ಸಂದರ್ಭದಲ್ಲಿ ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಶೆಟ್ಟಿ, ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ, ತರಬೇತುದಾರರಾದ ವೇಣುಗೋಪಾಲ ಪುತ್ತೂರು, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಜೇಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ವಲಯ ಉಪಾಧ್ಯಕ್ಷ ನಾಗೇಂದ್ರ ಪೈ ಉಪಸ್ಥಿತರಿದ್ದರು. ಗೌತಮ್ ನಾವಡ ವಂದಿಸಿದರು.

Exit mobile version