Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಮಾರಿಜಾತ್ರೆ ಸಂದರ್ಭ ಬಿಜೆಪಿಯಿಂದ ಚಾಯ್ ಪೇ ಜಾತ್ರಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ಮಹಾಂಕಾಳಿ ಅಮ್ಮನವರ ದೇವಸ್ಥಾನದ ಪ್ರಸಿದ್ಧ ಮಾರಿಜಾತ್ರೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವತಿಯಿಂದ ನಡೆದ ಚಾಯ್ ಪೇ ಜಾತ್ರಾ ಕಾರ್ಯಕ್ರಮವನ್ನು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿಯವರು ಉದ್ಘಾಟಿಸಿದರು.

ಬಿಜೆಪಿ ಮುಖಂಡ ಪುಪ್ಪರಾಜ್ ಶೆಟ್ಟಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಭಟ್ಕಳ ಅರ್ಬನ್ ಕೋ ಬ್ಯಾಂಕ್ ನಿರ್ದೇಶಕ ತುಳಸಿದಾಸ್ ಮೊಗೆರ, ಗ್ರಾಮ್ ಪಂಚಾಯತ್ ಸದಸ್ಯ ನಾಗರಾಜ್ ಪಿ.ಬಿ, ಬಿಜೆಪಿ ಜಿಲ್ಲಾ ಮೀನುಗಾರರ ಪ್ರಕೋಷ್ಠ ಸಹಸಂಚಾಲಕ ಸಂದೀಪ್ ಖಾರ್ವಿ, ಯುವಮೋರ್ಚಾ ಕಾರ್ಯದರ್ಶಿ ನಿತಿನ್ ಖಾರ್ವಿ ಇವರು ಉಪಸ್ಥಿತರಿದ್ದರು. ಮಹಾಂಕಾಳಿ ಅಮ್ಮನವರ ದೇವಸ್ಥಾನದ ಆಡಳಿತ ಮಂಡಳಿಯ ವಿಶೇಷ ಸಹಕಾರದಿಂದ ಜಾತ್ರ ಮಹೋತ್ಸವದಲ್ಲಿ ನೆರೆದ ಸಾವಿರಾರು ಭಕ್ತರಿಗೆ ಉಚಿತ ಚಹಾ ಹಾಗೂ ಲಘು ಉಪಹಾರವನ್ನು ನೀಡಲಾಯಿತು.

Exit mobile version