Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಎಸ್.ಕೆ.ಡಿ.ಆರ್.ಡಿ.ಪಿ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಇದರ ಉದ್ಘಾಟನಾ ಕಾರ್ಯಕ್ರಮ ಕೊಲ್ಲೂರು ಯೋಜನಾ ಕೇಂದ್ರದಲ್ಲಿ ನೆರವೇರಿತು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಶಿವರಾಮ್ ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರು ಮಂಜುನಾಥ ಪೂಜಾರಿ, ವಲಯದ ಮೇಲ್ವಿಚಾರಕರು ಮಂಜುನಾಥ, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ವಲಯದ ಸೇವಾಪ್ರತಿನಿಧಿಗಳು, ಸುವಿಧಾ ಸಹಾಯಕರು ಹಾಗೂ, ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೇವಾಪ್ರತಿನಿಧಿ ರಾಘವೇಂದ್ರ ಅವರು ಅತಿಥಿಗಳಿಗೆ ಸ್ವಾಗತಿಸಿದರು ಹಾಗೂ ಸೇವಾಪ್ರತಿನಿಧಿ ಗಣೇಶ್ ಕೊಠಾರಿ ಇವರು ಧನ್ಯವಾದ ಸಮಾರ್ಪಿಸಿದರು.

Exit mobile version