ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಫೆ.21: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷಾ ದಿನಾಚರಣೆಯನ್ನು ಆಚರಿಸಲಾಯಿತು.
ಕೆರಾಡಿ ವರಸಿದ್ದಿ ವಿನಾಯಕ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಆರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶ್ವ ಮಾತೃಭಾಷಾ ದಿನಸದ ಹಿನ್ನೆಲೆ ಮತ್ತು ಅಗತ್ಯತೆಯನ್ನು ವಿವರಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ರಘು ನಾಯ್ಕ ಅವರು ಕಾಲೇಜುಗಳು ಸಾಹಿತ್ಯ ಚಟುವಟಿಕೆಯ ಕೇಂದ್ರವಾಗಬೇಕು ಎಂಬುದನ್ನು ತಿಳಿಸಿದರು.
ಸಹಾಯಕ ಪ್ರಾಧ್ಯಾಪಕ ನವೀನ್ ಹೆಚ್ ಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೀನಾಕ್ಷಿಯವರು ವಿದ್ಯಾರ್ಥಿಗಳು ಉತ್ಸಾಹದಿಂದ ಸಾಹಿತ್ಯ ಚಟುವಟಿಕೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿ ಯುತಿಕಾ ಸ್ವಾಗತಿಸಿದರು ಹಾಗೂ ವಿನಾಯಕ ವಂದಿಸಿದರು.