Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಪೊಲೀಸ್ ಠಾಣೆ ಆವರಣದಲ್ಲಿನ ನಾಗಬನದ 16ನೇ ವರ್ಧಂತ್ಸೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ವೃತ್ತ ನಿರೀಕ್ಷಕರ ಕಛೇರಿ ಹಾಗೂ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿಗಳ ನೇತೃತ್ವದಲ್ಲಿ ಪೊಲೀಸ್ ಠಾಣೆಯ ಆವರಣದಲ್ಲಿನ ನಾಗಬನದ 16ನೇ ವರ್ಧಂತ್ಸೋತ್ಸವ ಬುಧವಾರ ಜರುಗಿತು.

ಅರ್ಚಕರು ನಾಗ ದೇವರಿಗೆ ಪಂಚವಿಂಶತಿ ಕಲಶ, ಸ್ನಪನಾಧೀವಾಸ ಹೋಮ, ನಾಗಯಕ್ಷೆಗೆ ಕಲಶಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.

ಈ ಸಂದರ್ಭ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಕುಟುಂಬಿಕರು, ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ಕುಟುಂಬಿಕರು, ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version