Site icon Kundapra.com ಕುಂದಾಪ್ರ ಡಾಟ್ ಕಾಂ

ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನ ವಾರ್ಷಿಕ ಭಜನೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಮಾ.8:
ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೈವಸ್ಥಾನದ ವಠಾರದಲ್ಲಿ ನಡೆಯಿತು.

ಕೃಷ್ಣ ದೇವಾಡಿಗ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಜನಾರ್ದನ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಸ್ಥಳೀಯ ಭಕ್ತಾಧಿಗಳು ಉಪಸ್ಥಿತರಿದ್ದರು.

ಎ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ 9.05ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.16ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ.

ಎ.15ರಿಂದ ಎ.16ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಗಂಟೆಗೆ ಗೆಂಡ ಸೇವೆ ಹಾಗೂ ರಾತ್ರಿ ಗಂಟೆ 9.30ಕ್ಕೆ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಿರಿಯಡ್ಕ ಇವರಿಂದ ಹಿರಿಯಡ್ಕ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯಲಿರುವುದು. ಮೂರು ದಿನದ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.

Exit mobile version