Kundapra.com ಕುಂದಾಪ್ರ ಡಾಟ್ ಕಾಂ

ಪತ್ರಕರ್ತ ಸುಬ್ರಹ್ಮಣ್ಯ ಭಟ್ ನಿಧನ

ಕುಂದಾಪುರ: ಸೌಪರ್ಣಿಕ ವಾರ್ತೆ ಪತ್ರಿಕೆಯ ಸಂಪಾದಕ ಸುಭ್ರಹ್ಮಣ್ಯ ಭಟ್ ಅಲ್ಪಕಾಲದ ಅಸೌಖ್ಯದಿಂದ ಸೆ.25ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿರುತ್ತಾರೆ.

ಉದಯವಾಣಿ ದೈನಿಕದ ಜಾಹೀರಾತು ವಿಭಾಗದ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಪತ್ರಕರ್ತ ಸುಬ್ರಹ್ಮಣ್ಯ ಭಟ್‌, ಇತ್ತೀಚೆಗೆ “ಸೌಪರ್ಣಿಕಾ ವಾರ್ತೆ’ ಎಂಬ ಸ್ವಂತ ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಈ ಹಿಂದೆ ಹಲವು ಪತ್ರಿಕೆಗಳಲ್ಲಿ ದುಡಿದಿ ದ್ದರು. ಮೃತರು ವಂಡ್ಸೆ ಸಮೀಪದ ಹೊಸೂರು ಮೂಲದವರಾಗಿದ್ದು ಕುಂದಾಪುರ ಹವ್ಯಕ ಬ್ರಾಹ್ಮಣ ಸಮಾಜದ ಸಂಘಟನೆಯಲ್ಲಿ ಸಕ್ರಿಯ ರಾಗಿದ್ದರು.

ಹೊಸನಗರದ ರಾಮಚಂದ್ರ ಮಠದೊಡನೆ ನಿಕಟ ಸಂಬಂಧವನ್ನು ಹೊಂದಿರುವ ಅವರು ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಸದಸ್ಯ ರಾಗಿದ್ದರು. ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅತೀವ ದುಃಖ ವ್ಯಕ್ತ ಪಡಿಸಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.

Exit mobile version