Site icon Kundapra.com ಕುಂದಾಪ್ರ ಡಾಟ್ ಕಾಂ

ಪದವಿ ಪರೀಕ್ಷೆಯಲ್ಲಿ ವೈಷ್ಣವಿ ಗೋಪಾಲ್‌ಗೆ ಪ್ರಥಮ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.21:
ಮಂಗಳೂರು ವಿಶ್ವವಿದ್ಯಾನಿಲಯದ 2020-21ನೇ ಸಾಲಿನ ಪರೀಕ್ಷೆಯಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ವೈಷ್ಣವಿ ಗೋಪಾಲ ಚಂದನ್ ಬಿಎ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿರುವ ಇವರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಈಕೆ ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ್ ದಂಪತಿಯ ಪುತ್ರಿ.

Exit mobile version