Kundapra.com ಕುಂದಾಪ್ರ ಡಾಟ್ ಕಾಂ

ಕೇಂದ್ರ ಸರಕಾರದಿಂದ ಸಾಂವಿಧಾನಿಕ ಸಂಸ್ಥೆಗಳ ದುರಪಯೋಗ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಖಂಡನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದೇಶದ ಸಾoವಿಧಾನಿಕ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಮಣಿಸಲು ಬಳಸಿಕೊಂಡ ಸ್ವಾತಂತ್ರ್ಯ ನಂತರದ ಪ್ರಥಮ ಪ್ರಧಾನಿ ನರೇಂದ್ರ ಮೋಧಿ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆರೋಪಿಸಿದ್ದಾರೆ.

ವಿರೋಧ ಪಕ್ಷಗಳ ಮಣಿಸಲು ಸ್ವಾಯತ್ತ ಸಂಸ್ಥೆಗಳಾದ ಐಟಿ ,ಇಡಿ ಮತ್ತು ಸಿಬಿಐ ಯಂತಹ ಸಂಸ್ಥೆಗಳನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋಧಿ ಮತ್ತು ಗ್ರಹ ಸಚಿವ ಅಮಿತ್ ಷಾ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದ್ರಷ್ಟಕರ ಎಂದಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ನಾಯಕರುಗಳನ್ನು ಮತ್ತು ದೇಶದ ವಿರೋಧ ಪಕ್ಷದ ಮುಖಂಡರನ್ನುಮಣಿಸಲು ಸ್ವಾಯತ್ತ ಸಂಸ್ಥೆ ಗಳ ದುರ್ಬಳಕೆ ಮಾಡಿ ದಾಳಿ ಮಾಡುವುದು ನಿರಂತರವಾಗಿ ನಡೆಯುತ್ತಾ ಬಂದಿದ್ದು, ಪ್ರಜೆಗಳ ಸ್ವಾತಂತ್ರ್ಯ ಕಿತ್ತುಕೊoಡು ಅಧಿಕಾರ ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಸರ್ವಾಧಿಕಾರಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version