Kundapra.com ಕುಂದಾಪ್ರ ಡಾಟ್ ಕಾಂ

ಕಾರು ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲಿಯೇ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾದ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ನಾಗೂರಿನ ನಿವಾಸಿ ಸದಾಶಿವ ಶ್ಯಾನುಭೋಗ್ (45) ಎಂದು ಮೃತಪಟ್ಟಿದ್ದಾರೆ.

► ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರ ಸಾವುhttps://kundapraa.com/?p=59900 .

ಭಟ್ಕಳ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವ್ಯಾಕ್ಸ್ ವೋಗನ್ ಪೋಲೋ ಕಾರು ರಸ್ತೆ ದಾಟಿಸಲು ಯತ್ನಿಸುತ್ತಿದ್ದ ಸದಾಶಿವ ಶ್ಯಾನುಭೋಗ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸದಾಶಿವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version