Kundapra.com ಕುಂದಾಪ್ರ ಡಾಟ್ ಕಾಂ

ಕುವೈತ್: ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುವೈತ್:
ಸಂಘಟಕ, ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರು ದಾಖಲೆ ಪ್ರಮಾಣದಲ್ಲಿ ರಕ್ತದಾನ ಮಾಡಿರುವುದನ್ನು ಗುರುತಿಸಿ ವಿಶ್ವ ರಕ್ತದಾನಿಗಳ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ರಾಯಭಾರಿ ಸಿಬಿ ಜಾರ್ಜ್ ಅವರು ಸುರೇಶ್ ಅವರಿಗೆ ಗೌರವಿಸಿದರು.

ಕುವೈತ್ ದೇಶದಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗದಲ್ಲಿರುವ ಸುರೇಶ್ ಶ್ಯಾಮ್ ರಾವ್ ಅವರು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ, ಕುವೈತ್ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Exit mobile version