Kundapra.com ಕುಂದಾಪ್ರ ಡಾಟ್ ಕಾಂ

ಸಿದ್ಧಾಪುರ: ದಿನಸಿ ಅಂಗಡಿಗೆ ಬೆಂಕಿ. ಕೊಟ್ಯಂತರ ರೂ. ನಷ್ಟ

ಕುಂದಾಪುರ: ತಾಲೂಕಿನ ಸಿದ್ದಾಪುರದಲ್ಲಿ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದ್ದು ಸುಮಾರು ಒಂದು ಕೋಟಿಗೂ ಮಿಕ್ಕಿ ನಷ್ಟ ಸಂಭವಿಸಿದೆ.

ಸಿದ್ದಾಪುರದ ‘ಕಾಮತ್ ಜನರಲ್ ಸ್ಟೋರ್’ ಬೆಂಕಿಗೆ ಆಹುತಿಯಾದ ಅಂಗಡಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಅಂಗಡಿಯನ್ನು ಆವರಿಸಿದೆ ಎಂದು ಶಂಕಿಸಲಾಗಿದೆ. ಸಿದ್ದಾಪುರ ಪೇಟೆಯಲ್ಲಿರುವ ಈ ಅಂಗಡಿಯಲ್ಲಿ ದಿನಬಳಕೆಯ ವಸ್ತುಗಳಲ್ಲದೆ, ಹಲವಾರು ಗೃಹೋಪಯೋಗಿ ವಸ್ತುಗಳನ್ನು ಮಾರಾಟಕ್ಕೆ ಇಡಲಾಗುತ್ತಿತ್ತು. ಶುಕ್ರವಾರ ರಾತ್ರಿ 11.30 ರ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಗೆ ಅಂಗಡಿಯನ್ನು ಸಂಪೂರ್ಣ ಭಸ್ಮ ಮಾಡಿದೆ. ರವೀಂದ್ರನಾಥ್ ಕಾಮತ್ ಒಡೆತನದ ಈ ಅಂಗಡಿ ಇರುವ ಕಟ್ಟಡಕ್ಕೂ ಹಾನಿಯಾಗಿದೆ.

ಸ್ಥಳಕ್ಕಾಗಮಿಸಿದ ಕುಂದಾಪುರ ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಶಂಕರನಾರಾಯಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version