ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಕುಟೀರದ ವಿದ್ಯಾರ್ಥಿಗಳಿಂದ ಸಂಪೂರ್ಣ ಭಗವದ್ಗೀತಾ ಪಠಣ. ಸಂಜೆ ಭಜನೆ ಹಾಗೂ ವಿಷ್ಣು ಸಹಸ್ರನಾಮ ಪಠನ ಜರುಗಿತು. ಶ್ರೀ ಕೃಷ್ಣನಿಗೆ ಪ್ರಿಯವಾದ ತುಳಸಿ ದಳ ಅರ್ಪಣೆ ಮಾಡಿದರು ಬಳಿಕ ಪ್ರಸಾದ ವಿತರಿಸಲಾಯಿತು. ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ನಡೆದವು. ಜಿಲ್ಲಾ ಭಗವದ್ಗೀತಾ ಅಭಿಯಾನದ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮ ನಿರ್ವಹಿಸಿದರು.