Site icon Kundapra.com ಕುಂದಾಪ್ರ ಡಾಟ್ ಕಾಂ

ಯಡ್ತರೆ: ಉದ್ಯಮಿ ಮುತ್ತಯ್ಯ ಪೂಜಾರಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಯಡ್ತರೆ ಸಸಿಹಿತ್ಲು ಮನೆ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತಯ್ಯ ಪೂಜಾರಿ (70) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಅಪಾರ ದೈವಭಕ್ತರಾಗಿದ್ದ ಮುತ್ತಯ್ಯ ಪೂಜಾರಿ ಅವರು, ಯಡ್ತರೆ ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷರಾಗಿ, ಯಡ್ತರೆ ತೆಂಗು ಬಾಳೆ ಸೊಸೈಟಿಯ ಮಾಜಿ ಅಧ್ಯಕ್ಷರಾಗಿ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಕಾಂಗ್ರೆಸ್ ಮುಖಂಡ ಸುಬ್ರಹ್ಮಣ್ಯ ಪೂಜಾರಿ ಸೇರಿದಂತೆ ನಾಲ್ವರು ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Exit mobile version