Kundapra.com ಕುಂದಾಪ್ರ ಡಾಟ್ ಕಾಂ

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್: ಕುಂದಾಪುರ ಜ್ಯೂನಿಯರ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಕುಂದಾಪುರ ಪುರಸಭೆಯ ಸದಸ್ಯ ಮೋಹನ್ ದಾಸ್ ಶೆಣೈ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಸತೀಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಂದಾಪುರ ವಲಯದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ. ಕುಂದಾಪುರ ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಚಂದ್ರ ಶೆ,ಟ್ಟಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ದತ್ತಾತ್ರೇಯ ನಾಯಕ್, ಕಾಲೇಜಿನ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು,

ಸಂಸ್ಥೆಯ ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಅವರು ಅತಿಥಿಗಳನ್ನು ಸ್ವಾಗತಿಸಿದರು. ಪ್ರಕಾಶ್ಚಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ. ಕಾರ್ಯಕ್ರಮ ನಿರ್ವಹಿಸಿ ಪಂದ್ಯಾಟವನ್ನು ಸಂಘಟಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್ಲ ವಿಭಾಗದ ಬಹುಮಾನಗಳ ಪ್ರಾಯೋಜಕರಾದ ಅಧ್ಯಾಪಕ ಜಯಶೀಲ ಶೆಟ್ಟಿ ಬಹುಮಾನವನ್ನು ವಿತರಿಸಿದರು.

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳು ಪ್ರಥಮ, ಕಾಳಾವರ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳು ಪ್ರಥಮ, ಗಂಗೊಳ್ಳಿ ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರು.

Exit mobile version