Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಕುಂದಾಪುರ ವಲಯದ ನಾಲ್ವರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022-23ನೇ ಸಾಲಿನ ಶಿಕ್ಷಕರ ದಿನದ ಅಂಗವಾಗಿ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕುಂದಾಪುರ ವಲಯದ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕೆಳಸುಂಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಸುಜಾತ ಕೆ., ಹಿರಿಯ ಪ್ರಾಥಮಿಕ ವಿಭಾದಲ್ಲಿ ಹೆಂಗವಳ್ಳಿಯ ದುರ್ಗಾಪರಮೇಶ್ವರಿ ಅನುದಾನಿತ ಹಿ.ಪ್ರಾ ಶಾಲೆ ತೊಂಭತ್ತು ಇದರ ಸಹಶಿಕ್ಷಕ ನವೀನ್ ಚಂದ್ರ ಹೆಗ್ಡೆ, ಬಿದ್ಕಲಕಟ್ಟೆಯ ಕೆಪಿಎಸ್ ಪ್ರಾಥಮಿಕ ಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಕಾಳವರ ಸರಕಾರಿ ಪ್ರೌಢಶಾಲಾ ಶಿಕ್ಷಕ ಗಣೇಶ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಸೆ.5ರಂದು ಮಣಿಪಾಲ ರಜತಾದ್ರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಆತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರನ್ನು ಗೌರವಿಸಲಾಗುವುದು.

ಇದನ್ನೂ ಓದಿ:
► ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಬೈಂದೂರು ವಲಯದ ಐವರು ಆಯ್ಕೆ – https://kundapraa.com/?p=61850 .
► ಉದಯ ಕುಮಾರ್ ಎಂ.ಪಿ ಅವರಿಗೆ ಉತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿ- https://kundapraa.com/?p=61808 .

Exit mobile version